ಆಫ್ರಿಕಾದಲ್ಲಿ ಎಬೋಲಾ ರುದ್ರನರ್ತನ: ಕಾಂಗೋ, ಉಗಾಂಡಾದಿಂದ ಬರುವ ಪ್ರಯಾಣಿಕರಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಹತ್ವದ ಸೂಚನೆ!

mirrortvkannada.com
Date : 22 May 2026, 2:54 pm Posted By : MIRROR TV KANNADA

ಆಫ್ರಿಕಾದಲ್ಲಿ ಎಬೋಲಾ ರುದ್ರನರ್ತನ: ಕಾಂಗೋ, ಉಗಾಂಡಾದಿಂದ ಬರುವ ಪ್ರಯಾಣಿಕರಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಹತ್ವದ ಸೂಚನೆ!

ಆಫ್ರಿಕಾ ಖಂಡದ ಕಾಂಗೋ ಮತ್ತು ಉಗಾಂಡಾ ದೇಶಗಳಲ್ಲಿ ಮಾರಕ 'ಎಬೋಲಾ' ವೈರಸ್ ಭೀಕರವಾಗಿ ಹರಡುತ್ತಿದ್ದು, ವ್ಯಾಪಕ ಜನಹಾನಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭಾರತ ಸರ್ಕಾರವು ತೀವ್ರ ಜಾಗರೂಕತೆ ವಹಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯವು ದೇಶದ ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳು ಮತ್ತು ಬಂದರುಗಳಿಗೆ ಹೈ ಅಲರ್ಟ್ ಘೋಷಿಸಿದ್ದು, ಪೀಡಿತ ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಿನ ನಿಗಾ ಇಡುವಂತೆ ಮಹತ್ವದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ವಿಶೇಷವಾಗಿ ಕಾಂಗೋ ಮತ್ತು ಉಗಾಂಡಾ ದೇಶಗಳಿಂದ ನೇರವಾಗಿ ಅಥವಾ ಇತರ ದೇಶಗಳ ಮೂಲಕ ಭಾರತಕ್ಕೆ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಕಡ್ಡಾಯವಾಗಿ ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸಬೇಕು ಎಂದು ಸಚಿವಾಲಯ ಸೂಚಿಸಿದೆ. ಒಂದು ವೇಳೆ ಪ್ರಯಾಣಿಕರಲ್ಲಿ ಜ್ವರ, ತೀವ್ರ ಸುಸ್ತು, ಸ್ನಾಯು ನೋವು ಅಥವಾ ರಕ್ತಸ್ರಾವದಂತಹ ಎಬೋಲಾ ರೋಗಲಕ್ಷಣಗಳು ಕಂಡುಬಂದರೆ, ಅವರನ್ನು ತಕ್ಷಣವೇ ಪ್ರತ್ಯೇಕಿಸಿ (Isolation) ವಿಶೇಷ ನಿಗಾ ಘಟಕಗಳಲ್ಲಿ ಚಿಕಿತ್ಸೆ ನೀಡಲು ವಿಮಾನ ನಿಲ್ದಾಣಗಳ ಆರೋಗ್ಯ ಅಧಿಕಾರಿಗಳಿಗೆ ಆದೇಶಿಸಲಾಗಿದೆ.
ಎಬೋಲಾ ಅತ್ಯಂತ ವೇಗವಾಗಿ ಹರಡುವ ಮತ್ತು ಪ್ರಾಣಾಂತಿಕ ಕಾಯಿಲೆಯಾಗಿರುವುದರಿಂದ, ಸಾರ್ವಜನಿಕರು ತುರ್ತು ಕೆಲಸಗಳಿಲ್ಲದಿದ್ದರೆ ಸದ್ಯದ ಪರಿಸ್ಥಿತಿಯಲ್ಲಿ ಕಾಂಗೋ ಮತ್ತು ಉಗಾಂಡಾ ದೇಶಗಳಿಗೆ ಪ್ರಯಾಣಿಸದಂತೆ ಕೇಂದ್ರ ಸರ್ಕಾರ ಮನವಿ ಮಾಡಿದೆ. ದೇಶದೊಳಗೆ ವೈರಸ್ ಹರಡದಂತೆ ತಡೆಯಲು ರಾಜ್ಯ ಸರ್ಕಾರಗಳೊಂದಿಗೂ ಕೇಂದ್ರ ಆರೋಗ್ಯ ಸಚಿವಾಲಯ ಸಮನ್ವಯ ಸಾಧಿಸುತ್ತಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದೆ.

⬇ DOWNLOAD
×

ಆಫ್ರಿಕಾ ಖಂಡದ ಕಾಂಗೋ ಮತ್ತು ಉಗಾಂಡಾ ದೇಶಗಳಲ್ಲಿ ಮಾರಕ ‘ಎಬೋಲಾ’ ವೈರಸ್ ಭೀಕರವಾಗಿ ಹರಡುತ್ತಿದ್ದು, ವ್ಯಾಪಕ ಜನಹಾನಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭಾರತ ಸರ್ಕಾರವು ತೀವ್ರ ಜಾಗರೂಕತೆ ವಹಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯವು ದೇಶದ ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳು ಮತ್ತು ಬಂದರುಗಳಿಗೆ ಹೈ ಅಲರ್ಟ್ ಘೋಷಿಸಿದ್ದು, ಪೀಡಿತ ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಿನ ನಿಗಾ ಇಡುವಂತೆ ಮಹತ್ವದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ವಿಶೇಷವಾಗಿ ಕಾಂಗೋ ಮತ್ತು ಉಗಾಂಡಾ ದೇಶಗಳಿಂದ ನೇರವಾಗಿ ಅಥವಾ ಇತರ ದೇಶಗಳ ಮೂಲಕ ಭಾರತಕ್ಕೆ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಕಡ್ಡಾಯವಾಗಿ ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸಬೇಕು ಎಂದು ಸಚಿವಾಲಯ ಸೂಚಿಸಿದೆ. ಒಂದು ವೇಳೆ ಪ್ರಯಾಣಿಕರಲ್ಲಿ ಜ್ವರ, ತೀವ್ರ ಸುಸ್ತು, ಸ್ನಾಯು ನೋವು ಅಥವಾ ರಕ್ತಸ್ರಾವದಂತಹ ಎಬೋಲಾ ರೋಗಲಕ್ಷಣಗಳು ಕಂಡುಬಂದರೆ, ಅವರನ್ನು ತಕ್ಷಣವೇ ಪ್ರತ್ಯೇಕಿಸಿ (Isolation) ವಿಶೇಷ ನಿಗಾ ಘಟಕಗಳಲ್ಲಿ ಚಿಕಿತ್ಸೆ ನೀಡಲು ವಿಮಾನ ನಿಲ್ದಾಣಗಳ ಆರೋಗ್ಯ ಅಧಿಕಾರಿಗಳಿಗೆ ಆದೇಶಿಸಲಾಗಿದೆ.

ಎಬೋಲಾ ಅತ್ಯಂತ ವೇಗವಾಗಿ ಹರಡುವ ಮತ್ತು ಪ್ರಾಣಾಂತಿಕ ಕಾಯಿಲೆಯಾಗಿರುವುದರಿಂದ, ಸಾರ್ವಜನಿಕರು ತುರ್ತು ಕೆಲಸಗಳಿಲ್ಲದಿದ್ದರೆ ಸದ್ಯದ ಪರಿಸ್ಥಿತಿಯಲ್ಲಿ ಕಾಂಗೋ ಮತ್ತು ಉಗಾಂಡಾ ದೇಶಗಳಿಗೆ ಪ್ರಯಾಣಿಸದಂತೆ ಕೇಂದ್ರ ಸರ್ಕಾರ ಮನವಿ ಮಾಡಿದೆ. ದೇಶದೊಳಗೆ ವೈರಸ್ ಹರಡದಂತೆ ತಡೆಯಲು ರಾಜ್ಯ ಸರ್ಕಾರಗಳೊಂದಿಗೂ ಕೇಂದ್ರ ಆರೋಗ್ಯ ಸಚಿವಾಲಯ ಸಮನ್ವಯ ಸಾಧಿಸುತ್ತಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದೆ.

Editor Reporter
mirrortvkannada.com

ಆಫ್ರಿಕಾದಲ್ಲಿ ಎಬೋಲಾ ರುದ್ರನರ್ತನ: ಕಾಂಗೋ, ಉಗಾಂಡಾದಿಂದ ಬರುವ ಪ್ರಯಾಣಿಕರಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಹತ್ವದ ಸೂಚನೆ!

ಆಫ್ರಿಕಾ ಖಂಡದ ಕಾಂಗೋ ಮತ್ತು ಉಗಾಂಡಾ ದೇಶಗಳಲ್ಲಿ ಮಾರಕ 'ಎಬೋಲಾ' ವೈರಸ್ ಭೀಕರವಾಗಿ ಹರಡುತ್ತಿದ್ದು, ವ್ಯಾಪಕ ಜನಹಾನಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭಾರತ ಸರ್ಕಾರವು ತೀವ್ರ ಜಾಗರೂಕತೆ ವಹಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯವು ದೇಶದ ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳು ಮತ್ತು ಬಂದರುಗಳಿಗೆ ಹೈ ಅಲರ್ಟ್ ಘೋಷಿಸಿದ್ದು, ಪೀಡಿತ ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಿನ ನಿಗಾ ಇಡುವಂತೆ ಮಹತ್ವದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ವಿಶೇಷವಾಗಿ ಕಾಂಗೋ ಮತ್ತು ಉಗಾಂಡಾ ದೇಶಗಳಿಂದ ನೇರವಾಗಿ ಅಥವಾ ಇತರ ದೇಶಗಳ ಮೂಲಕ ಭಾರತಕ್ಕೆ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಕಡ್ಡಾಯವಾಗಿ ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸಬೇಕು ಎಂದು ಸಚಿವಾಲಯ ಸೂಚಿಸಿದೆ. ಒಂದು ವೇಳೆ ಪ್ರಯಾಣಿಕರಲ್ಲಿ ಜ್ವರ, ತೀವ್ರ ಸುಸ್ತು, ಸ್ನಾಯು ನೋವು ಅಥವಾ ರಕ್ತಸ್ರಾವದಂತಹ ಎಬೋಲಾ ರೋಗಲಕ್ಷಣಗಳು ಕಂಡುಬಂದರೆ, ಅವರನ್ನು ತಕ್ಷಣವೇ ಪ್ರತ್ಯೇಕಿಸಿ (Isolation) ವಿಶೇಷ ನಿಗಾ ಘಟಕಗಳಲ್ಲಿ ಚಿಕಿತ್ಸೆ ನೀಡಲು ವಿಮಾನ ನಿಲ್ದಾಣಗಳ ಆರೋಗ್ಯ ಅಧಿಕಾರಿಗಳಿಗೆ ಆದೇಶಿಸಲಾಗಿದೆ.
ಎಬೋಲಾ ಅತ್ಯಂತ ವೇಗವಾಗಿ ಹರಡುವ ಮತ್ತು ಪ್ರಾಣಾಂತಿಕ ಕಾಯಿಲೆಯಾಗಿರುವುದರಿಂದ, ಸಾರ್ವಜನಿಕರು ತುರ್ತು ಕೆಲಸಗಳಿಲ್ಲದಿದ್ದರೆ ಸದ್ಯದ ಪರಿಸ್ಥಿತಿಯಲ್ಲಿ ಕಾಂಗೋ ಮತ್ತು ಉಗಾಂಡಾ ದೇಶಗಳಿಗೆ ಪ್ರಯಾಣಿಸದಂತೆ ಕೇಂದ್ರ ಸರ್ಕಾರ ಮನವಿ ಮಾಡಿದೆ. ದೇಶದೊಳಗೆ ವೈರಸ್ ಹರಡದಂತೆ ತಡೆಯಲು ರಾಜ್ಯ ಸರ್ಕಾರಗಳೊಂದಿಗೂ ಕೇಂದ್ರ ಆರೋಗ್ಯ ಸಚಿವಾಲಯ ಸಮನ್ವಯ ಸಾಧಿಸುತ್ತಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದೆ.

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్