ಜೂನ್ ತಿಂಗಳಲ್ಲಿ ಕರ್ನಾಟಕದ 15 ಜಿಲ್ಲೆಗಳಲ್ಲಿ ಮಳೆ ಕೊರತೆ: ಮುಂಗಾರು ಮಾರುತಗಳ ವಿಳಂಬ

mirrortvkannada.com
Date : 02 July 2026, 1:28 am Posted By : MIRROR TV KANNADA

ಜೂನ್ ತಿಂಗಳಲ್ಲಿ ಕರ್ನಾಟಕದ 15 ಜಿಲ್ಲೆಗಳಲ್ಲಿ ಮಳೆ ಕೊರತೆ: ಮುಂಗಾರು ಮಾರುತಗಳ ವಿಳಂಬ

ರಾಜ್ಯದಲ್ಲಿ ಈ ಬಾರಿ ನೈರುತ್ಯ ಮುಂಗಾರು ನಿರೀಕ್ಷಿತ ಮಟ್ಟದಲ್ಲಿ ಸುರಿದಿಲ್ಲ. ಜೂನ್ ತಿಂಗಳ ಅಂತ್ಯದ ವೇಳೆಗೆ ಕರ್ನಾಟಕದ ಒಟ್ಟು 15 ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆ ಎದುರಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ವರದಿ ಮಾಡಿದೆ. ಒಟ್ಟಾರೆ ರಾಜ್ಯದಲ್ಲಿ ಶೇಕಡಾ 40 ರಷ್ಟು ಮಳೆ ಕೊರತೆಯಾಗಿದೆ.

ಜುಲೈ ತಿಂಗಳಿನಲ್ಲೂ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಮಳೆ ಅಭಾವದಿಂದಾಗಿ ಶರಾವತಿ ಕಣಿವೆ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ಜಲವಿದ್ಯುತ್ ಉತ್ಪಾದನೆಗೆ ಭಾರಿ ಪೆಟ್ಟು ಬಿದ್ದಿದೆ.

ಕೃಷಿ ಚಟುವಟಿಕೆಗಳಿಗೂ ಹಿನ್ನಡೆಯಾಗಿದ್ದು, ರೈತರು ಆತಂಕದಲ್ಲಿದ್ದಾರೆ. ಕರಾವಳಿ ಭಾಗದಲ್ಲಿ ಮಾತ್ರ ಸದ್ಯ ಮಳೆಯ ಅಬ್ಬರ ಜೋರಾಗಿದ್ದರೂ, ಮಲೆನಾಡು ಮತ್ತು ಒಳನಾಡಿನ ಜಿಲ್ಲೆಗಳು ಉತ್ತಮ ಮಳೆಗಾಗಿ ಮುಗಿಲತ್ತ ಮುಖ ಮಾಡಿವೆ.

⬇ DOWNLOAD
×

ರಾಜ್ಯದಲ್ಲಿ ಈ ಬಾರಿ ನೈರುತ್ಯ ಮುಂಗಾರು ನಿರೀಕ್ಷಿತ ಮಟ್ಟದಲ್ಲಿ ಸುರಿದಿಲ್ಲ. ಜೂನ್ ತಿಂಗಳ ಅಂತ್ಯದ ವೇಳೆಗೆ ಕರ್ನಾಟಕದ ಒಟ್ಟು 15 ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆ ಎದುರಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ವರದಿ ಮಾಡಿದೆ. ಒಟ್ಟಾರೆ ರಾಜ್ಯದಲ್ಲಿ ಶೇಕಡಾ 40 ರಷ್ಟು ಮಳೆ ಕೊರತೆಯಾಗಿದೆ.

ಜುಲೈ ತಿಂಗಳಿನಲ್ಲೂ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಮಳೆ ಅಭಾವದಿಂದಾಗಿ ಶರಾವತಿ ಕಣಿವೆ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ಜಲವಿದ್ಯುತ್ ಉತ್ಪಾದನೆಗೆ ಭಾರಿ ಪೆಟ್ಟು ಬಿದ್ದಿದೆ.

ಕೃಷಿ ಚಟುವಟಿಕೆಗಳಿಗೂ ಹಿನ್ನಡೆಯಾಗಿದ್ದು, ರೈತರು ಆತಂಕದಲ್ಲಿದ್ದಾರೆ. ಕರಾವಳಿ ಭಾಗದಲ್ಲಿ ಮಾತ್ರ ಸದ್ಯ ಮಳೆಯ ಅಬ್ಬರ ಜೋರಾಗಿದ್ದರೂ, ಮಲೆನಾಡು ಮತ್ತು ಒಳನಾಡಿನ ಜಿಲ್ಲೆಗಳು ಉತ್ತಮ ಮಳೆಗಾಗಿ ಮುಗಿಲತ್ತ ಮುಖ ಮಾಡಿವೆ.

Editor Reporter
mirrortvkannada.com

ಜೂನ್ ತಿಂಗಳಲ್ಲಿ ಕರ್ನಾಟಕದ 15 ಜಿಲ್ಲೆಗಳಲ್ಲಿ ಮಳೆ ಕೊರತೆ: ಮುಂಗಾರು ಮಾರುತಗಳ ವಿಳಂಬ

ರಾಜ್ಯದಲ್ಲಿ ಈ ಬಾರಿ ನೈರುತ್ಯ ಮುಂಗಾರು ನಿರೀಕ್ಷಿತ ಮಟ್ಟದಲ್ಲಿ ಸುರಿದಿಲ್ಲ. ಜೂನ್ ತಿಂಗಳ ಅಂತ್ಯದ ವೇಳೆಗೆ ಕರ್ನಾಟಕದ ಒಟ್ಟು 15 ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆ ಎದುರಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ವರದಿ ಮಾಡಿದೆ. ಒಟ್ಟಾರೆ ರಾಜ್ಯದಲ್ಲಿ ಶೇಕಡಾ 40 ರಷ್ಟು ಮಳೆ ಕೊರತೆಯಾಗಿದೆ.

ಜುಲೈ ತಿಂಗಳಿನಲ್ಲೂ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಮಳೆ ಅಭಾವದಿಂದಾಗಿ ಶರಾವತಿ ಕಣಿವೆ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ಜಲವಿದ್ಯುತ್ ಉತ್ಪಾದನೆಗೆ ಭಾರಿ ಪೆಟ್ಟು ಬಿದ್ದಿದೆ.

ಕೃಷಿ ಚಟುವಟಿಕೆಗಳಿಗೂ ಹಿನ್ನಡೆಯಾಗಿದ್ದು, ರೈತರು ಆತಂಕದಲ್ಲಿದ್ದಾರೆ. ಕರಾವಳಿ ಭಾಗದಲ್ಲಿ ಮಾತ್ರ ಸದ್ಯ ಮಳೆಯ ಅಬ್ಬರ ಜೋರಾಗಿದ್ದರೂ, ಮಲೆನಾಡು ಮತ್ತು ಒಳನಾಡಿನ ಜಿಲ್ಲೆಗಳು ಉತ್ತಮ ಮಳೆಗಾಗಿ ಮುಗಿಲತ್ತ ಮುಖ ಮಾಡಿವೆ.

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్