ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, ಜುಲೈ 8 ಕೊನೆಯ ದಿನ..

mirrortvkannada.com
Date : 04 July 2026, 10:14 pm Posted By : MIRROR TV KANNADA

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, ಜುಲೈ 8 ಕೊನೆಯ ದಿನ..

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಯುವಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಅವಕಾಶವನ್ನು ನೀಡಿದೆ. ಒಟ್ಟು 3991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಅಂತಿಮ ದಿನಾಂಕವನ್ನು ಇದೀಗ ವಿಸ್ತರಿಸಲಾಗಿದೆ.

 

ಈ ಹಿಂದೆ ನಿಗದಿಪಡಿಸಲಾಗಿದ್ದ ದಿನಾಂಕದೊಳಗೆ ತಾಂತ್ರಿಕ ದೋಷ, ಸರ್ವರ್ ಸಮಸ್ಯೆ ಅಥವಾ ಇತರ ಕಾರಣಗಳಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದ ಸಾವಿರಾರು ಅಭ್ಯರ್ಥಿಗಳಿಗೆ ಇದು ‌ಸ್ವಲ್ಪ ನಿರಾಳತೆಯನ್ನು ತಂದಿದೆ.

 

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ದಿನಾಂಕ ವಿಸ್ತರಣೆಯ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಯುವಕ-ಯುವತಿಯರು ಯಾವುದೇ ಆತಂಕವಿಲ್ಲದೆ ನಿಗದಿತ ಅವಧಿಯೊಳಗೆ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಚಿವರು ಸಲಹೆ ನೀಡಿದ್ದಾರೆ.

 

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಅರ್ಜಿ ಸಲ್ಲಿಕೆಗೆ ಹೊಸ ದಿನಾಂಕ

ಇಲಾಖೆಯು ಪ್ರಕಟಿಸಿರುವ ಹೊಸ ಪರಿಷ್ಕೃತ ವೇಳಾಪಟ್ಟಿಯಂತೆ, ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಇದೇ ಜುಲೈ 8, 2026 ರ ಸಂಜೆ 4:00 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳುವ ಕನಸು ಹೊತ್ತಿರುವ ಅಭ್ಯರ್ಥಿಗಳು ಕೊನೆಯ ಕ್ಷಣದವರೆಗೆ ಕಾಯದೆ, ತಕ್ಷಣವೇ ಅರ್ಜಿ ಸಲ್ಲಿಸುವುದು ಸೂಕ್ತವಾಗಿದೆ. ಅಂತಿಮ ದಿನಗಳಲ್ಲಿ ಆನ್‌ಲೈನ್ ಟ್ರಾಫಿಕ್ ಹೆಚ್ಚಾಗಿ ವೆಬ್‌ಸೈಟ್ ನಿಧಾನವಾಗುವ ಸಾಧ್ಯತೆ ಇರುವುದರಿಂದ, ಆದಷ್ಟು ಬೇಗ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿ.

 

ಅರ್ಜಿ ತಿದ್ದುಪಡಿಗೆ ಅವಕಾಶ

ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೂ ಒಂದು ಮುಖ್ಯವಾದ ಸೂಚನೆ ಇದೆ. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅದರಲ್ಲಿ ಯಾವುದಾದರೂ ತಪ್ಪುಗಳು ಕಂಡುಬಂದಲ್ಲಿ, ಅದನ್ನು ಸರಿಪಡಿಸಿಕೊಳ್ಳಲು ಇಲಾಖೆಯು ವಿಶೇಷ ಅವಕಾಶವನ್ನು ಒದಗಿಸಿದೆ. ಜುಲೈ 9, 2026 ರಿಂದ ಜುಲೈ 12, 2026 ರವರೆಗೆ ಅರ್ಜಿಗಳಲ್ಲಿ ತಿದ್ದುಪಡಿ ಮಾಡಲು ಲಿಂಕ್ ಸಕ್ರಿಯವಾಗಿರಲಿದೆ.

 

ಆಗ ನಿಮ್ಮ ಹೆಸರು, ಜನ್ಮ ದಿನಾಂಕ, ಶೈಕ್ಷಣಿಕ ವಿವರಗಳು ಅಥವಾ ಮೀಸಲಾತಿ ಪ್ರಮಾಣಪತ್ರದ ವಿವರಗಳಲ್ಲಿ ದೋಷಗಳಿದ್ದರೆ, ಈ ಅವಧಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಿಕೊಳ್ಳಬಹುದು. ಸರ್ಕಾರ ನೀಡಲಾಗಿರುವ ಈ ತಿದ್ದುಪಡಿ ಅವಕಾಶವನ್ನು ಅಭ್ಯರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.

 

ಕರ್ನಾಟಕ ಪೊಲೀಸ್ ಹುದ್ದೆಗಳಿಗೆ ಭಾರಿ ಪೈಪೋಟಿ

ಈ ಬಾರಿಯ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ರಾಜ್ಯಾದ್ಯಂತ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದೆ. ಲಭ್ಯವಿರುವ ಅಂಕಿ-ಅಂಶಗಳ ಪ್ರಕಾರ, ಈಗಾಗಲೇ ಲಕ್ಷಾಂತರ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಉಳಿಕೆ ಮೂಲ ವೃಂದದ ಮೀಸಲು ಪೊಲೀಸ್ ಹುದ್ದೆಗಳಿಗೆ ಬರೋಬ್ಬರಿ 2,80,216 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅದೇ ರೀತಿ, ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ 59,309 ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಸಿದ್ದಾರೆ

⬇ DOWNLOAD
×

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಯುವಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಅವಕಾಶವನ್ನು ನೀಡಿದೆ. ಒಟ್ಟು 3991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಅಂತಿಮ ದಿನಾಂಕವನ್ನು ಇದೀಗ ವಿಸ್ತರಿಸಲಾಗಿದೆ.

 

ಈ ಹಿಂದೆ ನಿಗದಿಪಡಿಸಲಾಗಿದ್ದ ದಿನಾಂಕದೊಳಗೆ ತಾಂತ್ರಿಕ ದೋಷ, ಸರ್ವರ್ ಸಮಸ್ಯೆ ಅಥವಾ ಇತರ ಕಾರಣಗಳಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದ ಸಾವಿರಾರು ಅಭ್ಯರ್ಥಿಗಳಿಗೆ ಇದು ‌ಸ್ವಲ್ಪ ನಿರಾಳತೆಯನ್ನು ತಂದಿದೆ.

 

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ದಿನಾಂಕ ವಿಸ್ತರಣೆಯ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಯುವಕ-ಯುವತಿಯರು ಯಾವುದೇ ಆತಂಕವಿಲ್ಲದೆ ನಿಗದಿತ ಅವಧಿಯೊಳಗೆ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಚಿವರು ಸಲಹೆ ನೀಡಿದ್ದಾರೆ.

 

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಅರ್ಜಿ ಸಲ್ಲಿಕೆಗೆ ಹೊಸ ದಿನಾಂಕ

ಇಲಾಖೆಯು ಪ್ರಕಟಿಸಿರುವ ಹೊಸ ಪರಿಷ್ಕೃತ ವೇಳಾಪಟ್ಟಿಯಂತೆ, ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಇದೇ ಜುಲೈ 8, 2026 ರ ಸಂಜೆ 4:00 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳುವ ಕನಸು ಹೊತ್ತಿರುವ ಅಭ್ಯರ್ಥಿಗಳು ಕೊನೆಯ ಕ್ಷಣದವರೆಗೆ ಕಾಯದೆ, ತಕ್ಷಣವೇ ಅರ್ಜಿ ಸಲ್ಲಿಸುವುದು ಸೂಕ್ತವಾಗಿದೆ. ಅಂತಿಮ ದಿನಗಳಲ್ಲಿ ಆನ್‌ಲೈನ್ ಟ್ರಾಫಿಕ್ ಹೆಚ್ಚಾಗಿ ವೆಬ್‌ಸೈಟ್ ನಿಧಾನವಾಗುವ ಸಾಧ್ಯತೆ ಇರುವುದರಿಂದ, ಆದಷ್ಟು ಬೇಗ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿ.

 

ಅರ್ಜಿ ತಿದ್ದುಪಡಿಗೆ ಅವಕಾಶ

ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೂ ಒಂದು ಮುಖ್ಯವಾದ ಸೂಚನೆ ಇದೆ. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅದರಲ್ಲಿ ಯಾವುದಾದರೂ ತಪ್ಪುಗಳು ಕಂಡುಬಂದಲ್ಲಿ, ಅದನ್ನು ಸರಿಪಡಿಸಿಕೊಳ್ಳಲು ಇಲಾಖೆಯು ವಿಶೇಷ ಅವಕಾಶವನ್ನು ಒದಗಿಸಿದೆ. ಜುಲೈ 9, 2026 ರಿಂದ ಜುಲೈ 12, 2026 ರವರೆಗೆ ಅರ್ಜಿಗಳಲ್ಲಿ ತಿದ್ದುಪಡಿ ಮಾಡಲು ಲಿಂಕ್ ಸಕ್ರಿಯವಾಗಿರಲಿದೆ.

 

ಆಗ ನಿಮ್ಮ ಹೆಸರು, ಜನ್ಮ ದಿನಾಂಕ, ಶೈಕ್ಷಣಿಕ ವಿವರಗಳು ಅಥವಾ ಮೀಸಲಾತಿ ಪ್ರಮಾಣಪತ್ರದ ವಿವರಗಳಲ್ಲಿ ದೋಷಗಳಿದ್ದರೆ, ಈ ಅವಧಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಿಕೊಳ್ಳಬಹುದು. ಸರ್ಕಾರ ನೀಡಲಾಗಿರುವ ಈ ತಿದ್ದುಪಡಿ ಅವಕಾಶವನ್ನು ಅಭ್ಯರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.

 

ಕರ್ನಾಟಕ ಪೊಲೀಸ್ ಹುದ್ದೆಗಳಿಗೆ ಭಾರಿ ಪೈಪೋಟಿ

ಈ ಬಾರಿಯ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ರಾಜ್ಯಾದ್ಯಂತ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದೆ. ಲಭ್ಯವಿರುವ ಅಂಕಿ-ಅಂಶಗಳ ಪ್ರಕಾರ, ಈಗಾಗಲೇ ಲಕ್ಷಾಂತರ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಉಳಿಕೆ ಮೂಲ ವೃಂದದ ಮೀಸಲು ಪೊಲೀಸ್ ಹುದ್ದೆಗಳಿಗೆ ಬರೋಬ್ಬರಿ 2,80,216 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅದೇ ರೀತಿ, ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ 59,309 ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಸಿದ್ದಾರೆ

Editor Reporter
mirrortvkannada.com

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, ಜುಲೈ 8 ಕೊನೆಯ ದಿನ..

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಯುವಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಅವಕಾಶವನ್ನು ನೀಡಿದೆ. ಒಟ್ಟು 3991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಅಂತಿಮ ದಿನಾಂಕವನ್ನು ಇದೀಗ ವಿಸ್ತರಿಸಲಾಗಿದೆ.

 

ಈ ಹಿಂದೆ ನಿಗದಿಪಡಿಸಲಾಗಿದ್ದ ದಿನಾಂಕದೊಳಗೆ ತಾಂತ್ರಿಕ ದೋಷ, ಸರ್ವರ್ ಸಮಸ್ಯೆ ಅಥವಾ ಇತರ ಕಾರಣಗಳಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದ ಸಾವಿರಾರು ಅಭ್ಯರ್ಥಿಗಳಿಗೆ ಇದು ‌ಸ್ವಲ್ಪ ನಿರಾಳತೆಯನ್ನು ತಂದಿದೆ.

 

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ದಿನಾಂಕ ವಿಸ್ತರಣೆಯ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಯುವಕ-ಯುವತಿಯರು ಯಾವುದೇ ಆತಂಕವಿಲ್ಲದೆ ನಿಗದಿತ ಅವಧಿಯೊಳಗೆ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಚಿವರು ಸಲಹೆ ನೀಡಿದ್ದಾರೆ.

 

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಅರ್ಜಿ ಸಲ್ಲಿಕೆಗೆ ಹೊಸ ದಿನಾಂಕ

ಇಲಾಖೆಯು ಪ್ರಕಟಿಸಿರುವ ಹೊಸ ಪರಿಷ್ಕೃತ ವೇಳಾಪಟ್ಟಿಯಂತೆ, ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಇದೇ ಜುಲೈ 8, 2026 ರ ಸಂಜೆ 4:00 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳುವ ಕನಸು ಹೊತ್ತಿರುವ ಅಭ್ಯರ್ಥಿಗಳು ಕೊನೆಯ ಕ್ಷಣದವರೆಗೆ ಕಾಯದೆ, ತಕ್ಷಣವೇ ಅರ್ಜಿ ಸಲ್ಲಿಸುವುದು ಸೂಕ್ತವಾಗಿದೆ. ಅಂತಿಮ ದಿನಗಳಲ್ಲಿ ಆನ್‌ಲೈನ್ ಟ್ರಾಫಿಕ್ ಹೆಚ್ಚಾಗಿ ವೆಬ್‌ಸೈಟ್ ನಿಧಾನವಾಗುವ ಸಾಧ್ಯತೆ ಇರುವುದರಿಂದ, ಆದಷ್ಟು ಬೇಗ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿ.

 

ಅರ್ಜಿ ತಿದ್ದುಪಡಿಗೆ ಅವಕಾಶ

ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೂ ಒಂದು ಮುಖ್ಯವಾದ ಸೂಚನೆ ಇದೆ. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅದರಲ್ಲಿ ಯಾವುದಾದರೂ ತಪ್ಪುಗಳು ಕಂಡುಬಂದಲ್ಲಿ, ಅದನ್ನು ಸರಿಪಡಿಸಿಕೊಳ್ಳಲು ಇಲಾಖೆಯು ವಿಶೇಷ ಅವಕಾಶವನ್ನು ಒದಗಿಸಿದೆ. ಜುಲೈ 9, 2026 ರಿಂದ ಜುಲೈ 12, 2026 ರವರೆಗೆ ಅರ್ಜಿಗಳಲ್ಲಿ ತಿದ್ದುಪಡಿ ಮಾಡಲು ಲಿಂಕ್ ಸಕ್ರಿಯವಾಗಿರಲಿದೆ.

 

ಆಗ ನಿಮ್ಮ ಹೆಸರು, ಜನ್ಮ ದಿನಾಂಕ, ಶೈಕ್ಷಣಿಕ ವಿವರಗಳು ಅಥವಾ ಮೀಸಲಾತಿ ಪ್ರಮಾಣಪತ್ರದ ವಿವರಗಳಲ್ಲಿ ದೋಷಗಳಿದ್ದರೆ, ಈ ಅವಧಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಿಕೊಳ್ಳಬಹುದು. ಸರ್ಕಾರ ನೀಡಲಾಗಿರುವ ಈ ತಿದ್ದುಪಡಿ ಅವಕಾಶವನ್ನು ಅಭ್ಯರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.

 

ಕರ್ನಾಟಕ ಪೊಲೀಸ್ ಹುದ್ದೆಗಳಿಗೆ ಭಾರಿ ಪೈಪೋಟಿ

ಈ ಬಾರಿಯ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ರಾಜ್ಯಾದ್ಯಂತ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದೆ. ಲಭ್ಯವಿರುವ ಅಂಕಿ-ಅಂಶಗಳ ಪ್ರಕಾರ, ಈಗಾಗಲೇ ಲಕ್ಷಾಂತರ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಉಳಿಕೆ ಮೂಲ ವೃಂದದ ಮೀಸಲು ಪೊಲೀಸ್ ಹುದ್ದೆಗಳಿಗೆ ಬರೋಬ್ಬರಿ 2,80,216 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅದೇ ರೀತಿ, ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ 59,309 ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಸಿದ್ದಾರೆ

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్