ಕಾವೇರಿ ನೀರು ಬಿಡುಗಡೆಗೆ ಸರ್ಕಾರಕ್ಕೆ ಆರ್. ಅಶೋಕ್ ಮೂರು ದಿನಗಳ ಗಡುವು

mirrortvkannada.com
Date : 13 July 2026, 10:24 pm Posted By : MIRROR TV KANNADA

ಕಾವೇರಿ ನೀರು ಬಿಡುಗಡೆಗೆ ಸರ್ಕಾರಕ್ಕೆ ಆರ್. ಅಶೋಕ್ ಮೂರು ದಿನಗಳ ಗಡುವು

ಮಂಡ್ಯ ಜಿಲ್ಲೆಯ ಮಳವಳ್ಳಿ ಸೇರಿದಂತೆ ಕಾವೇರಿ ನದಿ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ನೀರಿನ ಕೊರತೆಯಿಂದ ಬೆಳೆಗಳು ಒಣಗುತ್ತಿವೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ರೈತರ ಹಿತದೃಷ್ಟಿಯಿಂದ ಕೆಆರ್‌ಎಸ್ ಜಲಾಶಯದಿಂದ ಕೂಡಲೇ ನೀರು ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದ್ದಾರೆ.

ಒಣಗಿದ ಕಬ್ಬಿನ ಹೊಲಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದ ಅಶೋಕ್, ರಾಜ್ಯ ಸರ್ಕಾರ ಕದ್ದುಮುಚ್ಚಿ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂಬ ಆರೋಪ ಮಾಡಿದರು. ರೈತರು ಸಂಕಷ್ಟದಲ್ಲಿರುವಾಗ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಟೀಕಿಸಿದ ಅವರು, ಕಾವೇರಿ ನೀರಿನ ಹಂಚಿಕೆ ಕುರಿತು ಸರ್ವಪಕ್ಷ ಸಭೆ ನಡೆಸುವಂತೆ ಆಗ್ರಹಿಸಿದರು.

ಮೂರು ದಿನಗಳೊಳಗೆ ಕೆಆರ್‌ಎಸ್ ಜಲಾಶಯದಿಂದ ನೀರು ಹರಿಸದಿದ್ದರೆ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಆರ್. ಅಶೋಕ್ ಎಚ್ಚರಿಕೆ ನೀಡಿದರು.

⬇ DOWNLOAD
×

ಮಂಡ್ಯ ಜಿಲ್ಲೆಯ ಮಳವಳ್ಳಿ ಸೇರಿದಂತೆ ಕಾವೇರಿ ನದಿ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ನೀರಿನ ಕೊರತೆಯಿಂದ ಬೆಳೆಗಳು ಒಣಗುತ್ತಿವೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ರೈತರ ಹಿತದೃಷ್ಟಿಯಿಂದ ಕೆಆರ್‌ಎಸ್ ಜಲಾಶಯದಿಂದ ಕೂಡಲೇ ನೀರು ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದ್ದಾರೆ.

ಒಣಗಿದ ಕಬ್ಬಿನ ಹೊಲಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದ ಅಶೋಕ್, ರಾಜ್ಯ ಸರ್ಕಾರ ಕದ್ದುಮುಚ್ಚಿ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂಬ ಆರೋಪ ಮಾಡಿದರು. ರೈತರು ಸಂಕಷ್ಟದಲ್ಲಿರುವಾಗ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಟೀಕಿಸಿದ ಅವರು, ಕಾವೇರಿ ನೀರಿನ ಹಂಚಿಕೆ ಕುರಿತು ಸರ್ವಪಕ್ಷ ಸಭೆ ನಡೆಸುವಂತೆ ಆಗ್ರಹಿಸಿದರು.

ಮೂರು ದಿನಗಳೊಳಗೆ ಕೆಆರ್‌ಎಸ್ ಜಲಾಶಯದಿಂದ ನೀರು ಹರಿಸದಿದ್ದರೆ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಆರ್. ಅಶೋಕ್ ಎಚ್ಚರಿಕೆ ನೀಡಿದರು.

Editor Reporter
mirrortvkannada.com

ಕಾವೇರಿ ನೀರು ಬಿಡುಗಡೆಗೆ ಸರ್ಕಾರಕ್ಕೆ ಆರ್. ಅಶೋಕ್ ಮೂರು ದಿನಗಳ ಗಡುವು

ಮಂಡ್ಯ ಜಿಲ್ಲೆಯ ಮಳವಳ್ಳಿ ಸೇರಿದಂತೆ ಕಾವೇರಿ ನದಿ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ನೀರಿನ ಕೊರತೆಯಿಂದ ಬೆಳೆಗಳು ಒಣಗುತ್ತಿವೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ರೈತರ ಹಿತದೃಷ್ಟಿಯಿಂದ ಕೆಆರ್‌ಎಸ್ ಜಲಾಶಯದಿಂದ ಕೂಡಲೇ ನೀರು ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದ್ದಾರೆ.

ಒಣಗಿದ ಕಬ್ಬಿನ ಹೊಲಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದ ಅಶೋಕ್, ರಾಜ್ಯ ಸರ್ಕಾರ ಕದ್ದುಮುಚ್ಚಿ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂಬ ಆರೋಪ ಮಾಡಿದರು. ರೈತರು ಸಂಕಷ್ಟದಲ್ಲಿರುವಾಗ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಟೀಕಿಸಿದ ಅವರು, ಕಾವೇರಿ ನೀರಿನ ಹಂಚಿಕೆ ಕುರಿತು ಸರ್ವಪಕ್ಷ ಸಭೆ ನಡೆಸುವಂತೆ ಆಗ್ರಹಿಸಿದರು.

ಮೂರು ದಿನಗಳೊಳಗೆ ಕೆಆರ್‌ಎಸ್ ಜಲಾಶಯದಿಂದ ನೀರು ಹರಿಸದಿದ್ದರೆ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಆರ್. ಅಶೋಕ್ ಎಚ್ಚರಿಕೆ ನೀಡಿದರು.

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్