ಬೆಂಗಳೂರು: ರಾಜ್ಯದ ಕಾವೇರಿ ಹಾಗೂ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳಿಗೆ ಒಳಹರಿವು ಉತ್ತಮವಾಗಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿರುವ ಪರಿಣಾಮ ಭದ್ರಾ, ಹಾರಂಗಿ, ಕಬಿನಿ, ಕೆಆರ್ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ ಹಾಗೂ ಮಲಪ್ರಭಾ ಸೇರಿದಂತೆ ಪ್ರಮುಖ ಅಣೆಕಟ್ಟುಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.
ವಿಜಯಪುರ ಜಿಲ್ಲೆಯ ಆಲಮಟ್ಟಿ ಹಾಗೂ ಯಾದಗಿರಿ ಜಿಲ್ಲೆಯ ನಾರಾಯಣಪುರ ಜಲಾಶಯಗಳು ಬಹುತೇಕ ಭರ್ತಿಯಾಗಿವೆ. ಮುಂಗಾರು ಆರಂಭದಿಂದಲೂ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಗಳಿಗೆ ನಿರಂತರವಾಗಿ ನೀರು ಹರಿದುಬರುತ್ತಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ನೀರಿನ ಬಳಕೆಗೆ ಅನುಕೂಲವಾಗುವ ನಿರೀಕ್ಷೆ ಮೂಡಿದೆ.
ಆಗಸ್ಟ್ 14ರ ವೇಳೆಗೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ವಿವಿಧ ಜಲಾಶಯಗಳ ಒಳಹರಿವು, ಹೊರಹರಿವು ಹಾಗೂ ಸಂಗ್ರಹಣೆಯ ಪ್ರಮಾಣದಲ್ಲಿ ಬದಲಾವಣೆಗಳಾಗುತ್ತಿದ್ದು, ಮಳೆಯ ಪ್ರಮಾಣವನ್ನು ಆಧರಿಸಿ ನೀರಿನ ಮಟ್ಟವೂ ಏರಿಳಿತಗೊಳ್ಳುತ್ತಿದೆ. ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.








