ದೆಹಲಿನಲ್ಲಿ ನಡೆದ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ಕುಡಿಯುವ ನೀರಿನ ಅಗತ್ಯಕ್ಕೆ ಆದ್ಯತೆ ನೀಡುವಂತೆ ಮಾತ್ರ ಆದೇಶಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಕರ್ನಾಟಕದ ನೀರಿನ ಪರಿಸ್ಥಿತಿಯನ್ನು ರಾಜ್ಯದ ಅಧಿಕಾರಿಗಳು ವಿವರಿಸಿದ್ದು, ಕುಡಿಯುವ ನೀರಿನ ಮೀಸಲಾತಿಗೆ ಮಾತ್ರ ಸೂಚನೆ ನೀಡಲಾಗಿದೆ ಎಂದರು.
ತಮಿಳುನಾಡು ನೀರು ಬಿಡುಗಡೆ ಮಾಡುವಂತೆ ಬೇಡಿಕೆ ಸಲ್ಲಿಸಿದ್ದರೂ, ಅವರಿಗೆ ನೀರು ಬಿಡುವಂತೆ ಯಾವುದೇ ಆದೇಶ ಬಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಈ ಕಾರಣದಿಂದ ತಕ್ಷಣ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು.
ಪ್ರಸ್ತುತ ತಮಿಳುನಾಡಿಗೆ 3 ಟಿಎಂಸಿ ನೀರನ್ನು ಮಾತ್ರ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ ರಾಮಲಿಂಗಾರೆಡ್ಡಿ, ರಾಜ್ಯದಲ್ಲೇ ನೀರಿನ ಕೊರತೆ ಇರುವ ಕಾರಣ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದರು. ಈ ಬಗ್ಗೆ ಯಾವುದೇ ಆರೋಪಗಳು ಬಂದರೂ ವಾಸ್ತವ ಸ್ಥಿತಿ ಅಧಿಕೃತ ದಾಖಲೆಗಳಲ್ಲೇ ಸ್ಪಷ್ಟವಾಗುತ್ತದೆ ಎಂದು ಹೇಳಿದರು.









