ಕರ್ನಾಟಕ ಸರ್ಕಾರವು ಜಾತಿ ಹಾಗೂ ನಿವಾಸಿ ಪ್ರಮಾಣಪತ್ರ ಪಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸುವ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡಬೇಕಾದ ಅಗತ್ಯವಿಲ್ಲದೆ, ಪ್ರಮಾಣಪತ್ರಗಳನ್ನು ಮನೆ ಬಾಗಿಲಿಗೇ ಉಚಿತವಾಗಿ ವಿತರಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
ಈ ಸಂಬಂಧ ಕಂದಾಯ ಇಲಾಖೆಯ ವಿಶೇಷ ಅಭಿಯಾನ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರ ಸೇವೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರ ಉಪಸ್ಥಿತಿಯಲ್ಲಿ ಈ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.
ಈ ಯೋಜನೆಯ ಮೂಲಕ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮನೆ ಮನೆಗೆ ತೆರಳಿ ಜಾತಿ ಪ್ರಮಾಣಪತ್ರಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ. ಜನರಿಗೆ ಸಮಯ ಮತ್ತು ಹಣದ ಉಳಿತಾಯವಾಗುವುದರ ಜೊತೆಗೆ, ಸರ್ಕಾರಿ ಸೇವೆಗಳು ನೇರವಾಗಿ ಜನರಿಗೆ ತಲುಪುವಂತೆ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ.








