ಬೆಸ್ಕಾಂ ನಗರದ 66/11 ಕೆ.ವಿ. ಸಿ ಸ್ಟೇಷನ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜುಲೈ 26ರ ಭಾನುವಾರ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಕಾಮಗಾರಿ ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಯಲು ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸರಬರಾಜನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.
ಬೆಸ್ಕಾಂ ನೀಡಿರುವ ಮಾಹಿತಿಯಂತೆ, ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಕಡಿತ ಇರಲಿದೆ. ಶಿವಾಜಿನಗರ, ವಸಂತನಗರ, ಕ್ಯಾಂಟೋನ್ಮೆಂಟ್, ಪುಲಿಕೇಶಿನಗರ ಸೇರಿದಂತೆ ಸುತ್ತಮುತ್ತಲಿನ ನೂರಕ್ಕೂ ಹೆಚ್ಚು ರಸ್ತೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳ ನಿವಾಸಿಗಳು ಹಾಗೂ ವ್ಯಾಪಾರಸ್ಥರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಬೆಸ್ಕಾಂ ಮನವಿ ಮಾಡಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ವಿದ್ಯುತ್ ಸರಬರಾಜನ್ನು ಪುನಃ ಆರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.









