ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮನೆ ನಿರ್ಮಿಸಲು ಭೂಮಿ ಖರೀದಿಸಲು ಸಹಾಯ ಮಾಡುವಂತೆ ಭಾರತೀಯ ಕ್ರಿಕೆಟಿಗ ರಿಷಭ್ ಪಂತ್ ಮಾಡಿದ್ದ ಮನವಿಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸ್ಪಂದಿಸಿದ್ದಾರೆ.
ಶುಕ್ರವಾರ (ಆ.7) ಮಧ್ಯರಾತ್ರಿ ರಿಷಭ್ ಪಂತ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಉತ್ತರಾಖಂಡದಲ್ಲಿ ಮನೆ ಕಟ್ಟಲು ಭೂಮಿ ಕೊಡಿಸುವಂತೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಮನವಿ ಮಾಡಿದ್ದರು. ತಮ್ಮ ಮನವಿಯನ್ನು ಪರಿಗಣಿಸುವಂತೆ ಸಿಎಂ ಅವರನ್ನು ಟ್ಯಾಗ್ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಧಾಮಿ, ನಿಯಮಾನುಸಾರ ಅಗತ್ಯ ಕ್ರಮ ಕೈಗೊಂಡು ರಿಷಭ್ ಪಂತ್ ಅವರಿಗೆ ಎಲ್ಲಾ ರೀತಿಯ ಸಹಾಯ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಮನೆ ನಿರ್ಮಿಸುವ ಪಂತ್ ಅವರ ಯೋಜನೆಗೆ ಸರ್ಕಾರದಿಂದ ಅಗತ್ಯ ಸಹಕಾರ ದೊರೆಯಲಿದೆ ಎಂದು ಹೇಳಿದ್ದಾರೆ.









